ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಬಿಜಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪತ್ರ ಬರೆದಿದೆ.
ಹಾಗಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಮತ್ತೊಂದು ಸಂಕಷ್ಟ. ಪಾದಯಾತ್ರೆ ವೇಳೆ ಡಿ ಕೆ ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ.
ಡಿಜಿ- ಐಜಿಪಿ ಪ್ರವೀಣ್ ಸೂದ್ ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.
ಡಿಕೆ ಶಿವಕುಮಾರ್ ಕೋವಿಡ್ ನಿಯಮ ಪಾಲಿಸದೇ ಮಕ್ಕಳ ಜೊತೆ ಬೆರೆತಿದ್ದಾರೆ. ಶಾಲಾ ಮಕ್ಕಳ ಜೊತೆ ಕುಳಿತು ಫೋಟೋಗೆ ಫೋಸ್ ಕೊಟ್ಟಿದ್ದಾರೆ. ಮಾಸ್ಕ್ ಧರಿಸದೇ ಶಾಲಾಮಕ್ಕಳ ಜೊತೆ ಇದ್ದರು.
ಈ ಬಗ್ಗೆ ವಿಚಾರಣೆ ನಡೆಸಬೇಕೆಂದು ರಾಷ್ಟ್ರೀಯ ಆಯೋಗ ಡಿಜಿ ಪ್ರವೀಣ್ ಸೂದ್ ಗೆ ಪತ್ರದಲ್ಲಿ ಹೇಳಿದೆ.