29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಂಪುಟ ರಚನೆಯಲ್ಲಿ ಮೊದಲಿಗೆ 29 ಸಚಿವರಿಗೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ವಿಧಿ ಬೊಧಿಸಿದರು.

ಈ ಬಾರಿ 7 ಸಚಿವ ಸ್ಥಾನ ಬೆಂಗಳೂರು ನಗರಕ್ಕೆ ದೊರಕಿದೆ. ದಾವಣಗೆರೆ, ಕೋಲಾರ, ಚಿಕ್ಕಮಗಳೂರು, ಯಾದಗಿರಿ, ಬಳ್ಳಾರಿ, ಮೈಸೂರು, ರಾಮನಗರ, ಕೊಡಗು, ರಾಯಚೂರು, ವಿಜಯಪುರ, ಬಳ್ಳಾರಿ ,ಹಾಸನ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಿಲ್ಲ.

ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ, ಆರ್. ಅಶೋಕ್ – ಪದ್ಮನಾಭ ನಗರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ- ಮಲ್ಲೇಶ್ವರಂ, ಉಮೇಶ್ ಕತ್ತಿ-ಹುಕ್ಕೇರಿ, ಎಸ್.ಟಿ.ಸೋಮಶೇಖರ್ – ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್ – ಯಲ್ಲಾಪುರ, ಶಶಿಕಲಾ ಜೊಲ್ಲೆ – ನಿಪ್ಪಾಣಿ, ಕೆಸಿ ನಾರಾಯಣ್ ಗೌಡ- ಕೆ.ಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ – ಮುಧೋಳ, ಮುನಿರತ್ನ – ಆರ್ ಆರ್ ನಗರ,ಎಂಟಿಬಿ ನಾಗರಾಜ್ ಎಂಎಲ್ ಸಿ,ಗೋಪಾಲಯ್ಯ ಮಹಾಲಕ್ಷ್ಮಿ ಲೇಔಟ್,ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್- ಯಲ್ಬುರ್ಗ, ಕೋಟಾ ಶ್ರೀನಿವಾಸ ಪೂಜಾರಿ- ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ – ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿಸಿ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ‌ ಶ್ರೀರಾಮುಲು – ಮೊಳಕಾಲ್ಮೂರು, ಬಿ.ಸಿ.ಪಾಟೀಲ್ – ಹಿರೇಕೆರೂರು ಕ್ಷೇತ್ರದವರಾಗಿದ್ದು ಎಲ್ಲರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶ್ರೀಮಂತ್ ಪಾಟೀಲ್, ಸಿಪಿ ಯೋಗೇಶ್ವರ್, ಸುರೇಶ್ ಕುಮಾರ್,ಜಗದೀಶ್ ಶೆಟ್ಟರ್,ಲಕ್ಷ್ಮಣ ಸವದಿ,ಶಂಕರ್, ಅರವಿಂದ ಲಿಂಬಾವಳಿ ರನ್ನು ಸಂಪುಟದಿಂದ ಕೈ ಬಿಡಲಾಗಿದೆ.